ಕಣ್ಣಿಗೆ ಕಂಡದ್ದೆಲ್ಲವನ್ನೂ
ಮನದ ಭಿತ್ತಿಯೊಳಗೆ ಮೂಡಿಸಲಾಗುವುದಿಲ್ಲ;
ಒಳಗೆ ಮೂಡಿದ್ದೆಲ್ಲವನ್ನೂ
ಹೊರಗೆ ಹಂಚಿಕೊಳ್ಳಲೂ ಆಗುವುದಿಲ್ಲ.
ಕಂಬನಿಯ ಬದುಕಿಗೆ
ಕವಿತೆಯ ಕರವಸ್ತ್ರ ಕೊಟ್ಟವರು
ಮಾತಿನ ಹಾದಿಯುದ್ದಕ್ಕೆ
ಮೌನದ ಹೆಜ್ಜೆ ಇಟ್ಟು ಹೋಗಿದ್ದಾರೆ.
ಇಷ್ಟಕ್ಕೂ ಭಾವವೊಂದು
ನನ್ನದೇ ಮಾತಾಗಿ ದಾಖಲಾಗಲೇಬೇಕೆ!
ಗುಳ್ಳೆ-
ಒಳಿತು,ಚೆಲುವು,ಭಾವ,ಸಹಯಾನ,ಬದುಕು,ಬದಲಾವಣೆ,ನಾನುಇತ್ಯಾದಿ..
- ಎಲ್ಲ ಗುಳ್ಳೆಗಳೂಒಡೆದಿವೆ,
ಈ ದಾರಿ ಕೊನೆಗೊಂಡಿದೆ.
ಎಲ್ಲರ ಪ್ರೀತಿಯ ಸ್ಪಂದನೆಗೆ ತಲೆಬಾಗಿ ನಮಿಸುತ್ತಾ
ನೇಪಥ್ಯ ಸಿಂಧುವಿನೊಳಗಿನ್ನೊಂದು ಬಿಂದುವಾಗಿ..
-ಪ್ರೀತಿಯಿಂದ
ಸಿಂಧು
ಉತ್ತಿ ಬಿತ್ತಿದ್ದು
-
ಹಲ್ಲು ಬಿತ್ತೆಂದು ಅಳಬೇಡ ಮಗಳೇ
ಅವು ಹಾಲುಹಲ್ಲು, ಬೀಳಲೆಂದೇ ಹುಟ್ಟಿದವು
ವರುಷವೇಳಾಯ್ತಲ್ಲ ನಿನಗೆ, ಬೀಳುವವು ಹೀಗೆ ಒಂದೊಂದೇ
ಹುಟ್ಟುವುವಲ್ಲಿ ಹೊಸ ಹಲ್ಲು
ಫಳಫಳ ಹೊಳೆವ ಬಿಳಿಬಿಳಿ ಹಲ್ಲು...